ತಳುಕಿನ ರಾಮಸ್ವಾಮಯ್ಯ ಸುಬ್ಬರಾವ್ (೧೯೨೦ - ೧೯೮೪), ತರಾಸು ಎಂದೇ ಜನಪ್ರಿಯರಾದ ಕನ್ನಡದ ಖ್ಯಾತ ಕಾದಂಬರಿಕಾರರು.[೧] ಚಿತ್ರದುರ್ಗದ ಇತಿಹಾಸದ ಮೇಲೆ ಅವರು ರಚಿಸಿದ ಐತಿಹಾಸಿಕ ಕಾದಂಬರಿಗಳು; ಸಾಮಾನ್ಯ ಜನಜೀವನ ಕುರಿತ ಅವರ ಸಾಮಾಜಿಕ ಕಾದಂಬರಿಗಳು ಓದುಗರ ಅಪಾರ ಮೆಚ್ಚುಗೆಗೆ ಪಾತ್ರವಾಗಿವೆ. ಹಲವು ಕಾದಂಬರಿಗಳು ಸಿನಿಮಾಗಳಾಗಿವೆ. ಅವರ ‛ದುರ್ಗಾಸ್ತಮಾನ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.